ಪಠ್ಯ-ಪುಸ್ತಕ ಸಮಿತಿಯನ್ನು ರದ್ದು !

ಸೋಮವಾರ, 6 ಜೂನ್ 2022 (09:08 IST)
ಚಿತ್ರದುರ್ಗ : ಪಠ್ಯ ಪುಸ್ತಕ ಸಮಿತಿ ವಿಸರ್ಜನೆಯಾಗಿದೆ. ಆದರೆ ರದ್ದು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದೇವರ ಕೊಟ್ಟ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ. ನಮ್ಮದು ಬಸವ ಪಥದ ಸರ್ಕಾರ ಎಂದು ಮೊದಲೇ ಹೇಳಿದ್ದೇನೆ ಎಂದು ತಿಳಿಸಿದರು.

ಇನ್ನೂ ಬಸವಣ್ಣನವರು ರಚಿಸಿದ ಹಲವಾರು ಅತ್ಯುತ್ತಮ ವಚನಗಳಿವೆ. ಬಸವಣ್ಣನವರ ಪಠ್ಯದಲ್ಲಿ ಒಂದು ಲೈನ್ ವ್ಯತ್ಯಾಸವಾಗಿದೆ. ಉಳಿದಂತೆ ಬರಗೂರು ಸಮಿತಿ ರಚಿಸಿದ್ದ ಪಠ್ಯದಲ್ಲಿ ಇದ್ದಂತೆ ಇದೆ ಎಂದರು. 

ಬಸವಣ್ಣನವರ ಪಠ್ಯದ ವ್ಯತ್ಯಾಸ ಸರಿಪಡಿಸಲಾಗುವುದು. ನಾನಾ ಮಠಗಳ ಸ್ವಾಮೀಜಿಗಳ ಜೊತೆಗೆ ಚರ್ಚಿಸಿ ಅವರಿಗೆ ಇರುವ ಊಹಾಪೋಹಗಳನ್ನು ಸರಿಪಡಿಸಿದ್ದೇವೆ. ಆದಷ್ಟು ಶೀಘ್ರದಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕ ಒದಗಿಸುತ್ತೇವೆ ಎಂದು ಭರವಸೆ ನೀಡಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ