ಹೌದು, ಈ ಸಂಬಂಧ ಹೋರಾಟ ಸಮಿತಿ ಅಧ್ಯಕ್ಷ ವಿಜಯ್ ಕುಲಕರ್ಣಿ ಅವರು ಪ್ರತಿಕ್ರಿಯಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರಧಾನಿ ಮೋದಿ ಅವರು ಮಧ್ಯಂತರ ಆದೇಶವನ್ನು ತರುವ ಮೂಲಕ ಕನಿಷ್ಟ 7.5 ಟಿಎಂಸಿ ನೀರನ್ನು ಒದಗಿಸಲಿ ಎಂದು ಒತ್ತಾಯಿಸಿದರು.
ಇದೇ ವೇಳೆ, ರಾಜ್ಯದಿಂದ ಕೇಂದ್ರಕ್ಕೆ ನಿಯೋಗ ಹೋದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಬರುವ ಸೆಪ್ಟಂಬರ್ 5 ರಂದು ರಾಜ್ಯದ ಹಿರಿಯ ನ್ಯಾಯವಾದಿಗಳೊಂದಿಗೆ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಪಿ.ಪಿ.ಹೆಗ್ಗಡೆ ಅವರು ಕಾನೂನು ಸಲಹೆಗಳನ್ನು ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸಲಹೆಗಳನ್ನು ಪಡೆದು ಕಾನೂನು ಹೋರಾಟಕ್ಕಿಲಿಯಲಿದ್ದೇವೆ ಎಂದರು.