ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್

geetha

ಶನಿವಾರ, 10 ಫೆಬ್ರವರಿ 2024 (20:24 IST)
ಬೆಂಗಳೂರು-ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೇ ಪಾದಯಾತ್ರೆ ಮಾಡಿದ್ದಂತ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು.ಇದೇ ರೀತಿಯಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧವೂ ದೂರು ದಾಖಲಾಗಿತ್ತು. 
 
ಇನ್ನೂ ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅವರು ಹಾಜರಾಗದೇ  ಗೈರಾಗಿದ್ದರು. ಪೊಲೀಸರ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಬಳಿಕ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿತ್ತು. ಆದರೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೋರ್ಟ್ ವಿಚಾರಣೆ ಹಾಜರಾಗಿರಲಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ