ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ಪಂಚಮಸಾಲಿ ಸಮುದಾಯಕ್ಕೆ ತಪ್ಪು ಸಂದೇಶ ಹೋಗುತ್ತದೆ

ಗುರುವಾರ, 6 ಫೆಬ್ರವರಿ 2020 (12:29 IST)
ಬಾಗಲಕೋಟೆ : ಬೈಎಲೆಕ್ಷನ್ ನಲ್ಲಿ ಗೆದ್ದ 10 ಶಾಸಕರಿಗೆ ಸಚಿವ ಸ್ಥಾನ ನೀಡಿ ಕುಮಟಳ್ಳಿಗೆ ಮಾತ್ರ ಸಚಿವ ಸ್ಥಾನ ನೀಡದಿರುವುದಕ್ಕೆ  ಬಸವಜಯ ಮೃತ್ಯುಂಜಯಶ್ರೀ  ಬೇಸರ ವ್ಯಕ್ತಪಡಿಸಿದ್ದಾರೆ.

ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ಸರಿಯಲ್ಲ. ಪಂಚಮಸಾಲಿ ಸಮುದಾಯಕ್ಕೆ ತಪ್ಪು ಸಂದೇಶ ಹೋಗುತ್ತದೆ. ಕುಮಟಳ್ಳಿ ಆರಂಭದಲ್ಲಿ ರಮೇಶ್ ಜಾರಕಿಹೊಳಿ ಜತೆಯಿದ್ದರು. ಈಗ ಅವರನ್ನು ಕೈಬಿಟ್ಟಿದ್ದಕ್ಕೆ ಜನರು ಬೇಸರಗೊಂಡಿದ್ದಾರೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

 

ಅಲ್ಲದೇ  ಸಿಎಂ ಬಿಎಸ್ ವೈ ಹೈಕಮಾಂಡ್ ಒತ್ತಡದಿಂದ ಕೈ ಬಿಟ್ಟಿದ್ದಾರೆ. ಆದ್ರೆ ಕುಮಟಳ್ಳಿಯನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ