ಎಲ್ಲದಕ್ಕೂ ಪ್ರಧಾನಿಯನ್ನು ದೂರುವುದು ಸರಿಯಲ್ಲ: ಪ್ರಹ್ಲಾದ ಜೋಶಿ

ಸೋಮವಾರ, 26 ಡಿಸೆಂಬರ್ 2016 (10:25 IST)
ಕಳಾಸ-ಬಂಡೂರಿ ನಾಲಾ ಯೋಜನೆ ಜಾರಿ ಬಗ್ಗೆ ನಿಜವಾದ ಕಾಳಜಿ ಇದ್ದರೆ ರಾಜ್ಯ ಕಾಂಗ್ರೆಸ್ಸಿಗರು ಗೋವಾ ಕಾಂಗ್ರೆಸ್ಸಿಗರ ಮನವೊಲೈಸಲಿ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಸವಾಲ್ ಹಾಕಿದ್ದಾರೆ.
 
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಾಸ-ಬಂಡೂರಿ ನ್ಯಾಯಾಧೀಕರಣ ರಚನೆಯಾಗಿದ್ದೇ ಕಾಂಗ್ರೆಸ್ ಸರಕಾರವಿದ್ದಾಗ. ಈ ಕುರಿತು ಮಾಜಿ ಪ್ರಧಾನಿ  ಮನಮೋಹನ್ ಸಿಂಗ್ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಗೋವಾ ಕಾಂಗ್ರೆಸ್ಸಿಗರ ಮನವೊಲೈಸಲಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮನೆ ಪ್ರಧಾನ್ ನರೇದ್ರ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 
 
ರಾಜ್ಯ ಸರಕಾರದ ಅಧಿಕಾರಿಗಳ ನಿರ್ಲಕ್ಷದಿಂದ ನೀಟ್ ಪರೀಕ್ಷೆ ಕನ್ನಡದಲ್ಲಿ ನಡೆಯುತ್ತಿಲ್ಲ. ಈ ಕುರಿತು ರಾಜ್ಯ ಸರಕಾರ ಸರಿಯಾಗಿ ಮನವರಿಕೆ ಮಾಡಿದ್ದರೆ ನೀಟ್ ಪರೀಕ್ಷೆ ಕನ್ನಡಕ್ಕೆ ಅವಕಾಶ ಸಿಗುತ್ತಿದೆ. ಎಲ್ಲದಕ್ಕೂ ಪ್ರಧಾನಿ ಮೋದಿ ಅವರೇ ಕಾರಣ ಎನ್ನುವುದು ಸರಿಯಲ್ಲ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಸವಾಲ್ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ