ನಿನ್ನೆ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ ಅವರಿಗೆ ಮುತ್ತಿಗೆ ಹಾಕಿದ್ದ ಪ್ರತಿಭಟನಾನಿರತ ನರ್ಸ್ಗಳ ತಂಡ ಹುದ್ದೆಯನ್ನು ಖಾಯಂಗೊಳಿಸುವಂತೆ ತಾಕೀತು ಮಾಡಿತ್ತು. ಆದರೂ ಕೂಡ ಆಡಳಿತ ಮಂಡಳಿ ಇನ್ನೂ ಕೂಡ ಸೂಕ್ತ ಕ್ರಮಕ್ಕೆ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಶುಶ್ರೂಷಕಿಯರು ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರೂ ಕೂಡ ಸಾಥ್ ನೀಡಿದ್ದಾರೆ.
ಮೂಲಗಳ ಪ್ರಕಾರ, ರಾಜ್ಯ ಮಹಿಳಾ ಆಯೋಗಕ್ಕೂ ಕೂಡ ದೂರು ಸಲ್ಲಿಸಿದ್ದು, ತಮ್ಮ ಬೇಡಿಕೆ ಈಡೇರಿಕೆಗೆ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಯ ಶುಶ್ರೂಷಕಿಯರೂ ಕೂಡ ಇದೇ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ 45 ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.