ನಗರದ ಚಾಮರಾಜಪೇಟೆಯಲ್ಲಿರುವ ಅಪ್ಪಾಜಿಗೌಡರ ಕಚೇರಿ ಎದುರು ಬಾಗಿನ ಇಟ್ಟು ಪ್ರತಿಭಟನೆ ನಡೆಸುತ್ತಿರುವ ಶುಶ್ರೂಷಕಿಯರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದರು. ಈ ವೇಳೆ ನಾವು ಕಳೆದ 15 ದಿನಗಳಿಂದಲೂ ಕೂಡ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ನಮ್ಮ ಸಮಸ್ಯೆಗೆ ಯಾರೊಬ್ಬರೂ ಸ್ಪಂಧಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದ ಅವರು, ಸಂಘದ ಅಧ್ಯಕ್ಷರು ನಮ್ಮ ಸಮಸ್ಯೆಯನ್ನು ಈಡೇರಿಸಲಿ, ಇಲ್ಲವಾದಲ್ಲಿ ನಾವು ನೀಡುವ ಈ ಬಾಗಿನ ತೆಗೆದುಕೊಂಡು ಬಳೆ ತೊಟ್ಟುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಕಿಮ್ಸ್ ಆಸ್ಪತ್ರೆಯು ರಾಜ್ಯ ಒಕ್ಕಲಿಗ ಸಂಘದ ಆಡಳಿತಕ್ಕೊಳಪಟ್ಟಿದ್ದು, ಇಲ್ಲಿ ಪ್ರತಿಭಟನಾನಿರತ ಶುಶ್ರೂಷಕಿಯರೆಲ್ಲರೂ ಕೂಡ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೌಕರಿಯನ್ನು ಖಾಯಂಗೊಳಿಸಬೇಕಾಗಿ ಹಾಗೂ ಇತರೆ ನೂತನ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳದಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದಕ್ಕೆ ಒಪ್ಪದ ಆಡಳಿತ ಮಂಡಳಿ ಕೆಲಸಕ್ಕೆ ತಕ್ಕಂತೆ ವೇತನ ನೀಡಲಾಗುತ್ತಿದ್ದು, ಖಾಯಂಗೊಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ ಎನ್ನಲಾಗಿದೆ.