ಸುಧಾಕರ್‌ಗೆ ಒಂದು ಮತ ಜಾಸ್ತಿ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಪ್ರದೀಪ್‌ ಈಶ್ವರ್

sampriya

ಬುಧವಾರ, 29 ಮೇ 2024 (17:08 IST)
Photo By X
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರು ಒಂದು ಮತ ಜಾಸ್ತಿ ಪಡೆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರದೀಪ್‌ ಈಶ್ವರ್‌ ಹೇಳಿದರು.‌

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸುಧಾಕರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಗಿಂತ ಒಂದು ಮತ ಹೆಚ್ಚು ಪಡೆದಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.

ಇದೇ ವೇಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಾರಿ ಹತ್ತನೇ ತರಗತಿಯ ಪರೀಕ್ಷೆಯ ಸಂದರ್ಭದಲ್ಲಿ ಭಾರೀ ಸ್ಟ್ರಿಕ್ಟ್ ಮಾಡಿಸಿದ್ದಾರೆ. ಸಿಸಿ ಕ್ಯಾಮೆರಾ ಹಾಕಿ ಪರೀಕ್ಷೆ ನಡೆಸಿದ್ದಾರೆ. ಮಾಸ್ ಕಾಪಿ ಹೊಡೆಯೋಕೆ ಕಡಿವಾಣ ಹಾಕಿದ್ದಾರೆ. ಹಿಂದೆಲ್ಲಾ ಮಾಸ್ ಕಾಪಿ ನಡೆಯುತ್ತಿತ್ತು. ಆದರೆ ಈ ಭಾರಿ ಮಾಸ್ ಕಾಪಿ ನಡೆದಿಲ್ಲ ಎಂದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ