ಅಪರೇಷನ್ ಕಮಲ ಫೇಲ್; ಕೊನೆಗೂ ಬೆಂಗಳೂರಿಗೆ ಬಂದ ಅತೃಪ್ತರು

ಬುಧವಾರ, 13 ಫೆಬ್ರವರಿ 2019 (11:15 IST)
ಬೆಂಗಳೂರು : ಮುಂಬೈ ನಲ್ಲಿದ್ದ ನಾಲ್ವರು ಅತೃಪ್ತ ಶಾಸಕರು ಕೊನೆಗೂ ಬೆಂಗಳೂರಿಗೆ ಆಗಮಿಸಿದ್ದಾರೆ ಎಂಬುದಾಗಿ ತಿಳಿದಬಂದಿದೆ.


ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದ ನಾಲ್ವರು ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಮಹೇಶ್ ಕಮಟಳ್ಳಿ ಮತ್ತು ಬಿ. ನಾಗೇಂದ್ರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.


ಬೆಂಗಳೂರಿಗೆ ಆಗಮಿಸಿರುವ ಅತೃಪ್ತ ಕೈ ಶಾಸಕರು ಇಂದು ನಡೆಯಲಿರುವ ಅಧಿವೇಶನಕ್ಕೆ ಹಾಜರಾಗ್ತಾರಾ ಇಲ್ಲವಾ ಎನ್ನವುದು ಇನ್ನೂ ಖಚಿತವಾಗಿಲ್ಲ. ಆದರೆ ಅನರ್ಹತೆಗೆ ಶಿಫಾರಸ್ಸು ಮಾಡಲಾದ ಹಿನ್ನಲೆಯಲ್ಲಿ ನಾಲ್ವರು ಅತೃಪ್ತರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ