ಉಪ ಚುನಾವಣೆ ಬಳಿಕ ಮತ್ತೆ ಆಪರೇಷನ್ ಕಮಲ? – ಡಿಸಿಎಂ ಹೇಳಿದ್ದೇನು?

ಸೋಮವಾರ, 25 ನವೆಂಬರ್ 2019 (16:05 IST)
ಬಿಜೆಪಿ ಸರಕಾರಕ್ಕೆ ಬೆಂಬಲ ನೀಡಿ ಅಂತ ನಾವು ಯಾರ ಮನೆಗೂ ಹೋಗೋದಿಲ್ಲ. ಹೀಗಂತ ಡಿಸಿಎಂ ಖಡಕ್ ಆಗಿ ಹೇಳಿದ್ದಾರೆ.

ಮಂಡ್ಯದ ಹೊಸಹೊಳಲು ಗ್ರಾಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಬಿರುಸಿನ ಮತಪ್ರಚಾರ ನಡೆಸಿದ್ರು.
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಾ ಕಣದಲ್ಲಿರುವ ನಾರಾಯಣಗೌಡರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿ ಸರ್ಕಾರ ಸುಭದ್ರವಾಗಿದ್ದು, ಯಡಿಯೂರಪ್ಪ ಅವರೇ ಮೂರೂವರೆ ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿ ದಕ್ಷ ಪ್ರಾಮಾಣಿಕ ಆಡಳಿತ ನೀಡ್ತಾರೆ.

ಜೆಡಿಎಸ್-ಕಾಂಗ್ರೆಸ್ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿ ಗೊಂದಲ ಹುಟ್ಟುಹಾಕುತ್ತಿವೆ.

ನಮ್ಮ ಸರ್ಕಾರಕ್ಕೆ ಬೆಂಬಲ ನೀಡಿ ಎಂದು ಯಾರ ಮನೆಯ ಬಾಗಿಲಿಗೂ ಹೋಗಲ್ಲ. ನೋಡ್ತಾ ಇರಿ ನಮ್ಮ ಮನೆಗೇ ಬಂದು ಬಾಗಿಲು ತಟ್ಟುವವರೇ ಹೆಚ್ಚಾಗಿ ಬರ್ತಾರೆ ಎಂದು ಅಶ್ವತ್ಥನಾರಾಯಣ ಭವಿಷ್ಯ ನುಡಿದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ