ಆಪರೇಷನ್ ಕಮಲ ಭೀತಿ: ಹಿರಿಯ ಕಾಂಗ್ರೆಸ್ಸಿಗ ಹೇಳಿದ್ದೇನು?

ಮಂಗಳವಾರ, 15 ಜನವರಿ 2019 (18:34 IST)
ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂಬ ವದಂತಿ ದಟ್ಟವಾಗಿರುವಾಗಲೇ ಆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಹೇಳಿಕೆ ನೀಡಿದ್ದಾರೆ.

ನಿಜವಾದ ಕಾಂಗ್ರೆಸ್ಸಿಗರು ಯಾರು ಇದ್ದಾರೋ ಅವರು ಎಂದಿಗೂ ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ. ಹೀಗಂತ ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.  

ಕಾಂಗ್ರೆಸ್ ಪಕ್ಷದ ಯಾವೊಬ್ಬ ಶಾಸಕರೂ ಆಪರೇಷನ್ ಕಮಲಕ್ಕೆ ಬಲಿಯಾಗಬಾರದು. ನಿಜವಾಗಲೂ ಇರುವ ಕಾಂಗ್ರೆಸ್ ಶಾಸಕರು ಬಿಜೆಪಿಯವರ ಆಮಿಷಕ್ಕೆ ಸೊಪ್ಪು ಹಾಕುವುದಿಲ್ಲ ಎಂದಿದ್ದು, ಆಪರೇಷನ್ ಕಮಲಕ್ಕೆ ಯಾರೂ ಸಹ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.  

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗುತ್ತೇನೆ ಎಂದು ಮತ್ತೆ ಮತ್ತೆ ಕನಸು ಕಾಣುತ್ತಾ ಭ್ರಮೆಯಲ್ಲಿದ್ದಾರೆ. ಅದಕ್ಕಾಗಿ ಆಪರೇಷನ್ ಕಮಲಕ್ಕೆ ಚಾಲನೆ ನೀಡಿದ್ದಾರೆ ಎಂದು ದೂರಿದರು. ಬಿಜೆಪಿಯವರು ನಡೆಸುತ್ತಿರುವ ಈ ಕ್ರಮ ಪ್ಲಾಪ್ ಶೋ ಆಗಿದೆ ಎಂದು ಟೀಕೆ ಮಾಡಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ