ಮೊಮ್ಮಗನ ಸ್ಪರ್ಧೆಗೆ ದೇವೇಗೌಡರ ಕುಟುಂಬದಲ್ಲೇ ಭಿನ್ನಮತ?

ಮಂಗಳವಾರ, 7 ನವೆಂಬರ್ 2017 (09:15 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಚ್. ಡಿ. ರೇವಣ್ಣ ಪುತ್ರ ಪ್ರಜ್ವಲ್ ಗೌಡ ಸ್ಪರ್ಧೆ ಬಗ್ಗೆ ಕುಟುಂಬದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬುದು ಖಚಿತವಾಗಿದೆ.

 
ಪ್ರಜ್ವಲ್ ಸ್ಪರ್ಧಿಸುತ್ತಾರೆ. ಅವರ ಸ್ಪರ್ಧೆಗೆ ತಾತ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಸಿರು ನಿಶಾನೆ ತೋರಿದ್ದಾರೆ ಎಂದು ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಹೇಳಿದ ಕೆಲ ಹೊತ್ತಿನಲ್ಲೇ ಜೆಡಿಸ್ ರಾಜ್ಯಾಧ್ಯಕ್ಷ, ಪ್ರಜ್ವಲ್ ಚಿಕ್ಕಪ್ಪ ಕುಮಾರಸ್ವಾಮಿ ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದಿದ್ದಾರೆ.

ಹೊಳೆನರಸೀಪುರ ತಾಲೂಕಿನ ಈಶ್ವರ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ಭವಾನಿ ರೇವಣ್ಣ ಪ್ರಜ್ವಲ್, ಬೇಲೂರು ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಸ್ಪರ್ಧೆಗೆ ಸಿದ್ಧತೆ ಮಾಡಿಕೊಂಡಿದ್ದಾನೆ. ಯಾವ ಕ್ಷೇತ್ರದಲ್ಲಿ ಕಣಕ್ಕಿಳಿಯಬೇಕೆಂದು ದೇವೇಗೌಡರು ತೀರ್ಮಾನಿಸುತ್ತಾರೆ ಎಂದಿದ್ದಾರೆ.

ಆದರೆ ಅದೇ ದೇವಾಲಯಕ್ಕೆ ಕೆಲವೇ ಹೊತ್ತಿನ ನಂತರ ಬಂದ ಕುಮಾರಸ್ವಾಮಿ, ಮುಂದಿನ ಚುನಾವಣೆಯಲ್ಲಿ ರೇವಣ್ಣ ಮತ್ತು ಕುಮಾರಸ್ವಾಮಿ ಮಾತ್ರ ಸ್ಪರ್ಧಿಸುತ್ತಾರೆಂದು ದೇವೇಗೌಡರೇ ಹೇಳಿದ್ದಾರೆ. ಮುಂದೆ ಏನಾಗುತ್ತದೆಂದು ಹೇಳಲಾಗದು ಎನ್ನುವ ಮೂಲಕ ಪ್ರಜ್ವಲ್ ಸ್ಪರ್ಧೆ ಬಗ್ಗೆ ಗೊಂದಲ ಮೂಡಿಸುವ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ