ಕನ್ನಡ ನೆಲದಲ್ಲಿ ಇಂಗ್ಲೀಷ್‌ನಲ್ಲಿ ನಿರ್ಣಯ ಮಂಡಿಸಿದ ಜಗದೀಶ್ ಶೆಟ್ಟರ್

ಶುಕ್ರವಾರ, 23 ಸೆಪ್ಟಂಬರ್ 2016 (14:20 IST)
ಕಾವೇರಿ ವಿವಾದದ ಕುರಿತು ಈಡಿ ದೇಶದಲ್ಲೇ ಚರ್ಚೆಯಾಗುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಶೇಷ ವಿಧಾನ ಮಂಡಲ ಅಧಿವೇಶನದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ತಮ್ಮ ನಿರ್ಣಯವನ್ನು ಮಂಡಿಸಿದರು.
 
ಕಾವೇರಿಗಾಗಿ ವಿಶೇಷ ವಿಧಾನ ಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ನಿರ್ಣಯ ಮಂಡಿಸುವಂತೆ ಸ್ಪೀಕರ್ ಕೋಳಿವಾಡ್ ಸೂಚನೆ ನೀಡಿದರು. 
 
ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಹಾಗೂ ನೀರಿನ ಕೊರತೆಯ ಕುರಿತು ಪ್ರಸ್ತಾಪಿಸಿದ ಅವರು, ನೆಲ, ಜಲದ ಹಿತಾಸಕ್ತಿಗಾಗಿ ಈ ನಿರ್ಣಯ ಮಂಡಿಸಲಾಗಿದೆ ಎಂದು ಹೇಳಿದರು. 
 
ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಹಾಗೂ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಇಂದು ವಿಶೇಷ ವಿಧಾನ ಮಂಡಲ ಅಧಿವೇಶನ ಕರೆಯಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ