ಇಂದು ಹಾವೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬೃಹತ್ ಸಮಾವೇಶ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಈಶ್ವರಪ್ಪನವರು, ಸಮಾವೇಶದಲ್ಲಿ ನೇರೆದಿರುವ ಜನರನ್ನು ನೋಡಿ ನನ್ನ ಆತ್ಮಸ್ಥೈರ್ಯ ಮತ್ತಷ್ಟು ಹೆಚ್ಚಿದೆ. ಕೆಲವರು ಹಾವೇರಿಯಲ್ಲಿ ಬ್ರಿಗೇಡ್ ಸಮಾವೇಶ ಮಾಡಲು ವಿರೋಧ ವ್ಯಕ್ತಪಡಿಸಿದ್ದರು. ಅವರಿಗೆ ಸಮಾವೇಶದಲ್ಲಿ ನೆರೆದಿರುವ ಜನತೆ ಕೇವಲ ಸ್ಯಾಂಪಲ್ ತೋರಿಸಿದ್ದಾರೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ.............
ಕಾಗ್ರೆಸ್ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಹಿಂದ ಸಮಾಜವನ್ನು ತುಳಿಯುವಂತಹ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವನ್ನು ನಿರ್ನಾಮ ಮಾಡಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.