ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ನಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲಕ್ಕೆ ಬೇಸರ ವ್ಯಕ್ತ ಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷಗಳು ರಾಜಕಾರಣ ಹಾಗೂ ಪ್ರಚಾರಕ್ಕೆ ಮಾತ್ರ ಸೀಮಿತವಾಗಿವೆ. ಅವರಿಗೆ ಬೇರೆ ವಿಚಾರಗಳಲ್ಲಿ ಆಸಕ್ತಿಯಿಲ್ಲ ಎಂದು ಕಿಡಿಕಾರಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸೌಧಕ್ಕೆ ತನ್ನದೆ ಆದ ಗೌರವ ಇದೆ. ಎಲ್ಲರು ಸದನಕ್ಕೆ ಗೌರವ ನೀಡಬೇಕಾಗಿದೆ. ಪ್ರತಿಪಕ್ಷಗಳ ಪ್ರತಿಭಟನೆಯಿಂದ ಪ್ರಯೋಜನವಿಲ್ಲ. ಪ್ರತಿಪಕ್ಷಗಳು ರಾಜಕಾರಣ ಹಾಗೂ ಪ್ರಚಾರಕ್ಕೆ ಮಾತ್ರ ಸೀಮಿತವಾಗಿವೆ ಎಂದು ಹೇಳಿದರು.