ನಾನು ನಾಸ್ತಿಕ ಎಂದು ಅಪಪ್ರಚಾರ ಮಾಡಲಾಗುತಿದೆ: ಸಿಎಂ ಸಿದ್ದರಾಮಯ್ಯ

ಸೋಮವಾರ, 22 ಫೆಬ್ರವರಿ 2016 (14:28 IST)
ನಾನು ನಾಸ್ತಿಕ ಎಂದು ವಿಪಕ್ಷಗಳು ಆರೋಪಿಸುತ್ತಿವೆ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ, ನಾನು ನಾಸ್ತಿಕನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 
 
ನಾನು ನಾಸ್ತಿಕನಲ್ಲ ದೇವಾಲಯಗಳಿಗೆ ಹೋಗುತ್ತೇನೆ. ಆದರೆ, ಕಂಡ ಕಂಡ ದೇವಾಲಯಗಳಿಗೆ ಹೋಗುವುದಿಲ್ಲ. ದೇವನೊಬ್ಬ ನಾಮ ಹಲವು ಎನ್ನುವ ತತ್ವದಲ್ಲಿ ನಂಬಿಕೆಯಿಟ್ಟಿದ್ದೇನೆ ಎಂದು ಹೇಳಿದ್ದಾರೆ.
 
ತ್ರಿವೇಣಿ ಸಂಗಮದ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮೌಡ್ಯಗಳನ್ನು ಕಂದಾಚಾರಗಳನ್ನು ಎಲ್ಲವನ್ನು ವೈಜ್ಞಾನಿಕ ರೀತಿಯಲ್ಲಿ ನೋಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ