ರೈತರ ಮೇಲೆ ಹಲ್ಲೆಗೆ ಖಂಡನೆ: ಶಾಸಕರ ಅಣಕು ಶವಯಾತ್ರೆ

ಸೋಮವಾರ, 19 ನವೆಂಬರ್ 2018 (14:07 IST)
ರೈತರ ಮೇಲಿನ ಹಲ್ಲೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಜನಪ್ರತಿನಿಧಿಗಳ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ರ ಅಣಕು ಶವಯಾತ್ರೆಯನ್ನು ರೈತರು ನಡೆಸಿದ್ದಾರೆ.
ಕಳೆದ ರಾತ್ರಿ ರೈತರ ಮೇಲೆ ಬೆಂಬಲಿಗರನ್ನು ಬಿಟ್ಟು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ರೈತರ ಮೇಲಿನ ಹಲ್ಲೆ ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಗ್ರಾಮದಲ್ಲಿ ಬಂದ್ ಗೆ ಕರೆ ನೀಡಲಾಗಿದೆ.
ಒಂದು ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಐನಾಪೂರ ಪಟ್ಟಣದ ಗ್ರಾಮ ಪಂಚಾಯತಿ ಯಿಂದ ಮೋಳೆ ಸರ್ಕಲ್ ವರೆಗೆ ಶಾಸಕರ ಅಣಕು ಶವಯಾತ್ರೆ ನಡೆಸಲಾಯಿತು.

ಅಥಣಿ ಫಾರ್ಮರ್ಸ ಸಕ್ಕರೆ ಕಾರ್ಖಾನೆ ಮಾಲೀಕರೂ ಆಗಿರುವ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ