ರಾಮನಗರದ ಮಾಗಡಿ ತಾಲೂಕಿನ ಗೊರೂರಿನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ರಸ್ತೆಗೆ ಅಡ್ಡಲಾಗಿ ಮಲಗಿ ಮಹಿಳೆಯರು ಪ್ರತಿಭಟನೆ ವ್ಯಕ್ತಪಡಿಸಿದರು. ಸರ್ವೇ ಕಾರ್ಯಕ್ಕೆ ಮುಂದಾದಾಗ ಗ್ರಾಮಸ್ಥರು ಸಿಟ್ಟಿಗೆದ್ದು ಪ್ರತಿಭಟನೆ ಮಾಡಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿ ಪ್ರಹಾರ ಮಾಡಿದರು.