ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದೇ ನಮ್ಮ ಮುಖ್ಯ ಗುರಿ- ರಾಜೇಂದ್ರ ಅಗರ್ ವಾಲ್

ಶನಿವಾರ, 17 ಮಾರ್ಚ್ 2018 (15:43 IST)
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರ ಆಪ್ತರಾದ ಉತ್ತರಪ್ರದೇಶದ ಸಂಸದ ರಾಜೇಂದ್ರ ಅಗರ್ ವಾಲ್ ಹಾಗೂ ಅವರ ತಂಡ ಮೈಸೂರಿನಲ್ಲಿ ಬೀಡು ಬಿಡುವ ಮೂಲಕ ರಣತಂತ್ರ ರೂಪಿಸಿದ್ದಾರೆ.


ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರು ಹಾಗೂ  ಸಂಸದರ ಜತೆ ಚರ್ಚೆ ನಡೆಸಿದ ಮಾಹಿತಿ ಪಡೆದ ರಾಜೇಂದ್ರ ಅಗರ್ ವಾಲ್ ಅವರು ನಂತರ ಮಾಧ್ಯಮದವರೊಂದಿಗೆ ಮಾತನಾಡಿ,’ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸೋದೇ ನಮ್ಮ ಮುಖ್ಯ ಗುರಿ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಸೇರಿದಂತೆ ನಾಲ್ಕು ಕ್ಷೇತ್ರಗಳ ಉಸ್ತುವಾರಿ ನನಗೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅಚ್ಚರಿಯ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಸಲಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ