ನಮ್ಮ ನೀರು ನಮ್ಮ ಹಕ್ಕು ತಪೆನಿದೆ

ಮಂಗಳವಾರ, 1 ಮಾರ್ಚ್ 2022 (16:24 IST)
ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆ ರಾಜಕೀಯಕ್ಕಾಗಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
ಕುಡಿಯುವ ನೀರಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದಿಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರವನ್ನು ಬಡಿದೆಬ್ಬಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷವಾಗಿದೆ.‌ ಇನ್ನೂ ಮೇಕೆದಾಟು ಯೋಜನೆಗೆ ಪರಿಸರ ಇಲಾಖೆಯಿಂದ ನಿರಾಕ್ಷೇಪಣ ಪತ್ರ ಪಡೆದಿಲ್ಲ. ಇವರು ಬೆಂಗಳೂರು ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ