ಶಿಕ್ಷಕರ ವಿರುದ್ಧ ಆಕ್ರೋಶ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಗುರುವಾರ, 30 ಮೇ 2019 (18:01 IST)
ಶಾಲೆಗೆ ಬೀಗ ಜಡಿದು ಶಿಕ್ಷಕರನ್ನ ಹೊರ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಂಜಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ.

ಶಾಲೆಯಲ್ಲಿ ಸರಿಯಾದ ಪಾಠ ಮಾಡುತ್ತಿಲ್ಲ ಎಂದು ಶಿಕ್ಷಕರ ವಿರುದ್ದ ಆರೋಪ ಮಾಡಲಾಗಿದೆ. ಶಿಕ್ಷಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಗ್ರಾಮಸ್ಥರು.

ಶಿಕ್ಷಕರನ್ನ ಕೂಡಲೇ ವರ್ಗಾವಣೆ ಮಾಡುವಂತೆ ಗ್ರಾಮಸ್ಥರ ಒತ್ತಾಯವಾಗಿದೆ. ಹಲವು ಬಾರಿ ಮನವಿ ನೀಡಿದ್ದರು, ಸ್ಪಂದಿಸಿದ ಬಿಇಓ ವಿರುದ್ಧವೂ ಆಕ್ರೋಶ ಕೇಳಿಬಂದಿದೆ.

ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಟ್ಟೆವೊಡೆದಿದೆ. ಶಿಕ್ಷಕರು ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆಂದು ಗ್ರಾಮಸ್ಥರ ದೂರಾಗಿದೆ. ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ ನೀಡಿದ್ದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ