ಜಮ್ಮುವಿನ ಯುವಕರನ್ನು ಭಾರತದ ವಿರುದ್ಧ ಎತ್ತಿಕಟ್ಟುತ್ತಿರುವ ಪಾಕಿಸ್ತಾನ– ರಾಜನಾಥ್ ಸಿಂಗ್

ಭಾನುವಾರ, 7 ಜನವರಿ 2018 (13:19 IST)
ಭಾರತದ ವಿರುದ್ಧ ಜಮ್ಮು ಮತ್ತು ಕಾಶ್ಮಿರದ ಯುವಕರನ್ನು ಪಾಕಿಸ್ತಾನ ಎತ್ತಿಕಟ್ಟುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
 
ಮಧ್ಯಪ್ರದೇಶದ ಗ್ವಾಲಿಯರ್‍ನ ಟೆಕಾನ್‍ಪುರ್‌ನಲ್ಲಿ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ್ದಾರೆ.
 
ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಮೂಲಸೌಕರ್ಯ ಅಭಿವೃದ್ದಿ ಮುಂದುವರಿದಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಉಗ್ರರ ತರಬೇತಿ ಶಿಬಿರಗಳು ನಡೆಯುತ್ತಿವೆ. ಸಂವಹನ ಕೇಂದ್ರಗಳ ಸ್ಥಾಪನೆ ರೂಪದಲ್ಲಿ ಪಾಕಿಸ್ತಾನ ಭಯೋತ್ಪಾದನೆ ಮೂಲಸೌಕರ್ಯಕ್ಕೆ ಉತ್ತೇಜನ ಮುಂದುವರಿಸಿದೆ ಎಂದಿದ್ದಾರೆ.
 
ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರಿಗೆ ಹಣಕಾಸು ನೆರವು ಸೇರಿದಂತೆ ಎಲ್ಲ ರೀತಿಯ ಸಹಕಾರವನ್ನು ಪಾಕಿಸ್ತಾನ ನೀಡುತ್ತಿದೆ. ಧಾರ್ಮಿಕ ಸ್ಥಳಗಳಲ್ಲಿ ಗಲಭೆ ಮತ್ತು ಶಾಂತಿ ಕದಡುವ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ