ಗ್ರಾಮ ಪಂಚಾಯತ್ ಉಪಾಧ್ಯಕ್ಷನ ಬರ್ಬರ ಹತ್ಯೆ

ಭಾನುವಾರ, 1 ಮೇ 2016 (13:51 IST)
ಗ್ರಾಮ ಪಂಚಾಯತಿ ಉಪಾಧ್ಯಕ್ಷನಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಆನೇಕಲ್ ತಾಲೂಕಿನ ಚಿಕ್ಕದಾಸರಹಳ್ಳಿ ಕೆರೆ ಬಳಿ ನಡೆದಿದೆ.
 
ಹತ್ಯೆಯಾದ ವ್ಯಕ್ತಿಯನ್ನು ಅಶ್ವಥ್(30) ಎಂದು ಗುರುತಿಸಲಾಗಿದ್ದು ಅವರು ನೆರಿಗಾ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದು ನಿನ್ನೆ ರಾತ್ರಿ ಮನೆಗೆ ಹಿಂದಿರುಗುವಾಗ ಕೆರೆ ಬಳಿ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ. ಇದು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಹೇಳಲಾಗುತ್ತಿದೆ.
 
ಕಾಂಗ್ರೆಸ್ ಮುಖಂಡ ಕೇಶವಮೂರ್ತಿ ಮತ್ತು ಅವರ ಬೆಂಬಲಿಗರು ಈ ಕೃತ್ಯವನ್ನು ಎಸಗಿದ್ದಾರೆ ಎಂದು ಮೃತನ ಕುಟುಂಬದವರು ಆರೋಪಿಸುತ್ತಿದ್ದಾರೆ. ಆರೋಪಿಗಳನ್ನು ಬಂಧಿಸದಿದ್ದರೆ ಶವ ತೆಗೆಯಲು ಬಿಡಲ್ಲ ಎಂದು ಮತ್ತು ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದು ಪೊಲೀಸರು ಅವರನ್ನು ಸಮಾಧಾನ ಪಡಿಸಲು ಯತ್ನಿಸುತ್ತಿದ್ದಾರೆ. 
 
ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ವೆಬ್ದುನಿಯಾವನ್ನು ಓದಿ