ಪರಮೇಶ್ವರ್‌ಗೆ ಮುನಿಸು ಇಲ್ಲ ಎಂತಾದ್ದೂ ಇಲ್ಲ: ಸಿಎಂ

ಶನಿವಾರ, 2 ಸೆಪ್ಟಂಬರ್ 2017 (13:31 IST)
ನಿನ್ನೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರುಹಾಜರಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ.,ಪರಮೇಶ್ವರ್ ಅವರಿಗೆ ಯಾವುದೇ ಮುನಿಸು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ದೆಹಲಿಗೆ ತೆರಳಿದ್ದರಿಂದ ನಿನ್ನೆ ನಡೆದ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
 
ಜಿ.ಪರಮೇಶ್ವರ್ ನಿನ್ನೆ ಸದಾಶಿವನಗರದ ತಮ್ಮ ಮನೆಯಲ್ಲಿಯೇ ಇದ್ದರು ಎನ್ನುವ ಸುದ್ದಿಗಾರರ ಪ್ರಶ್ನೆಯಿಂದ ಕೋಪಗೊಂಡ ಸಿಎಂ ಹಾಗಾದ್ರೆ ಅವರನ್ನೇ ಕೇಳಿ ನನಗೆ ಗೊತ್ತಿಲ್ಲ ಎಂದು ತಮ್ಮ ಎಂದಿನ ಧಾಟಿಯಲ್ಲಿಯೇ ಉತ್ತರಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರಿಗೆ ಅಸಮಾಧಾನವಾಗಿದೆ. ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ಮಧ್ಯೆ ಭಿನ್ನಮತ ಸ್ಫೋಟಗೊಂಡಿದೆ ಎನ್ನುವ ಉಹಾಪೋಹ ವರದಿಗಳು ಹರಡಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ