ಡಿವೈಎಸ್ಪಿ ಅನುಪಮಾ ಶೆಣೈ ಎತ್ತಂಗಡಿ ಮಾಡಿಸಿದ್ದಾರೆಂಬ ಆರೋಪ ಹೊತ್ತಿರುವ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯಕ್ ವಿರುದ್ಧ ಮತ್ತೊಂದು ಎತ್ತಂಗಡಿ ಆರೋಪ ಕೇಳಿಬಂದಿದೆ. ಬಳ್ಳಾರಿಯ ಗುಡೇಕೋಟೆ ಆರ್ಎಫ್ಒ ದುದ್ದಗಿ ಅವರನ್ನು ಪರಮೇಶ್ವರ ನಾಯಕ್ ಎತ್ತಂಗಡಿ ಮಾಡಿಸಿರುವ ಆರೋಪ ಕೇಳಿಬಂದಿದೆ. ಮರಳು ದಂಧೆಕೋರರ ಒತ್ತಡಕ್ಕೆ ಮಣಿದು ದುದ್ದಗಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರೆಂದು ಹೇಳಲಾಗುತ್ತಿದೆ.