ಪರಿಷತ್ ನಾಮಕರಣದಲ್ಲಿಯೂ ಸಿಎಂ ಸಿದ್ದರಾಮಯ್ಯ ಕೈ ಮೇಲುಗೈಯಾಗಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಜಿ.ಪರಮೇಶ್ವರ್ರನ್ನು ಎತ್ತಂಗಡಿ ಮಾಡುವ ತಂತ್ರ ಸಿಎಂ ಮಾಡುತ್ತಿದ್ದಾರೆ. ಸಿಎಂ ಗೆ ತಮ್ಮ ಮಾತನ್ನು ಕೇಳುವ ವ್ಯಕ್ತಿ ಬೇಕು ಎಂದು ಕರಪತ್ರದಲ್ಲಿ ತಿಳಿಸಲಾಗಿದೆ,
ಕಾಂಗ್ರೆಸ್ ಪಕ್ಷದಲ್ಲಿ ಒಕ್ಕಲಿಗರ ಪ್ರಭಾವಿ ನಾಯಕರಿಲ್ಲ. ಲಿಂಗಾಯುತ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಆದ್ದರಿಂದ, ಪರಮೇಶ್ವರ್ ಅವರೇ ಮುಂದುವರಿಯಬೇಕು ಎಂದು ಜಿ.ಪರಮೇಶ್ವರ್ ಬೆಂಬಲಿಗರು ಒತ್ತಾಯಿಸಿದ್ದಾರೆ.