ಸಚಿವ ಸ್ಥಾನ ಕೊಡಿ ಅಂತಾ ಕೇಳೋದ್ರಲ್ಲಿ ತಪ್ಪೇನಿಲ್ಲ- ಶಾಸಕ ಪರಣ್ಣ ಮುನವಳ್ಳಿ

ಮಂಗಳವಾರ, 14 ಜನವರಿ 2020 (11:18 IST)
ಕೊಪ್ಪಳ : ಸಿಎಂ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ನಡೆಸುತ್ತಿದ್ದ ಬೆನ್ನಲಾ ಇದೀಗ ಮತ್ತೆ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಶುರು ಮಾಡಿದ್ದಾರೆ.



ಈ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ನಾನು ಪಕ್ಷದ ಶಿಸ್ತಿನ ಸಿಪಾಯಿ, ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಕಲ್ಯಾಣ ಕರ್ನಾಟಕ ಭಾಗಕ್ಕೆ 2 ರಿಂದ 3 ಸಚಿವ ಸ್ಥಾನ ಕೊಡಬೇಕು  ಎಂದು ಹೇಳಿದ್ದಾರೆ.


ಸಚಿವ ಸ್ಥಾನ ಕೊಡಿ ಅಂತಾ ಕೇಳೋದ್ರಲ್ಲಿ ತಪ್ಪೇನಿಲ್ಲ. ಸಚಿವ ಸ್ಥಾನ ಕೊಡದಿದ್ರೂ ಬೇಜಾರಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಏನು ಹೇಳುತ್ತೆ ಅದನ್ನ ಕೇಳ್ತಿನಿ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ