ನೀರು, ಅನ್ನಕ್ಕಾಗಿ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ

ಮಂಗಳವಾರ, 23 ಜೂನ್ 2020 (20:53 IST)
ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ರೋಗಿಗಳು ಪರದಾಡುವಂತಾಗಿದೆ.

ಬೆಂಗಳೂರಿನ ವಿಕ್ಟೋರಿಯಾ, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸರಿಯಾಗಿ ಊಟ, ತಿಂಡಿ ನೀಡುತ್ತಿಲ್ಲ. ಹೀಗಂತ ರೋಗಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಂಜೆ 4 ಗಂಟೆಯಾಗಿದ್ದರೂ ಹತ್ತಾರು ರೋಗಿಗಳು ಊಟವಿಲ್ಲದೇ ಹಸಿವಿನಿಂದ ಪರದಾಡುತ್ತಿದ್ದರು. ಅನ್ನ, ನೀರು ಸರಿಯಾಗಿ ಕೊಟ್ಟಿಲ್ಲ ಎಂದು ರೋಗಿಗಳು ಪ್ರತಿಭಟನೆ ಹಾದಿ ತುಳಿದಿದ್ದಾರೆ.

ಸಮಯಕ್ಕೆ ಸರಿಯಾಗಿ ಅನ್ನ, ನೀರು ಕೊಡಿ ಅಂತ ಅಲ್ಲಿರುವ ರೋಗಿಗಳು ಒತ್ತಾಯವನ್ನು ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ನಾವು ಸಾಯುತ್ತಿದ್ದೇವೆ. ಸರಿಯಾಗಿ ಊಟ ಕೊಡಿ. ಇಲ್ಲವೇ ನಮ್ಮನ್ನು ಮನೆಗೆ ಕಳುಹಿಸಿ ಎಂದು ರೋಗಿಗಳು ಅಳಲು ತೋಡಿಕೊಂಡಿರುವ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ