ತೆಲುಗು ಸ್ಟಾರ್ ನಟ, ರಾಜಕಾರಣಿ ಪವನ್ ಕಲ್ಯಾಣ್ ಬೆಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರ

Krishnaveni K

ಶುಕ್ರವಾರ, 29 ಮಾರ್ಚ್ 2024 (12:04 IST)
Photo Courtesy: Twitter
ಬೆಂಗಳೂರು: ತೆಲುಗು ಸ್ಟಾರ್ ನಟ, ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಈ ಬಾರಿ ಲೋಕಸಭೆ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಸ್ಪರ್ಧಿಸುತ್ತಿದ್ದಾರೆ. ಅವರು ಹಾಲಿ ಸಂಸದರೂ ಹೌದು. ಬೆಂಗಳೂರು ದಕ್ಷಿಣದಲ್ಲಿ ಸತತವಾಗಿ ಬಿಜೆಪಿ ಗೆಲ್ಲುತ್ತಲೇ ಬಂದಿದೆ. ತೇಜಸ್ವಿ ಸೂರ್ಯ ಎರಡನೇ ಬಾರಿಗೆ  ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಈ ಬಾರಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ತೆಲುಗು ನಟ ಪವನ್ ಕಲ್ಯಾಣ್ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ನಾಯಕರಾದ ಆರ್. ಅಶೋಕ್, ಜೆಡಿಎಸ್ ನಾಯಕ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಚಾರ ತೀರ್ಮಾನಿಸಲಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಕೆಲವೆಡೆ ತೆಲುಗು ಭಾಷಿಕರೂ ಇದ್ದಾರೆ. ಹೀಗಾಗಿ ಅವರ ಮತಗಳನ್ನು ಸೆಳೆಯಲು ಪವನ್ ಕಲ್ಯಾಣ್ ರನ್ನು ಕರೆತರಲಾಗುತ್ತಿದೆ.  ಪವನ್ ಕಲ್ಯಾಣ್ ಭಾಷಣದಿಂದ ಜನರನ್ನು ಸೆಳೆಯುವ ತಾಕತ್ತು ಹೊಂದಿದ್ದಾರೆ. ಈ ಮೊದಲು ಬಿಜೆಪಿ ಸಮಾವೇಶದಲ್ಲಿ ಅವರು ಭಾಗಿಯಾಗಿದ್ದರು. ಇದೀಗ ಬೆಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ