ಸುದೀಪ್ ತಾಯಿ ನಿಧನಕ್ಕೆ ಕನ್ನಡದಲ್ಲೇ ಪತ್ರ ಬರೆದು ಸಂತಾಪ ಸೂಚಿಸಿದ ಪವನ್ ಕಲ್ಯಾಣ್

Sampriya

ಭಾನುವಾರ, 20 ಅಕ್ಟೋಬರ್ 2024 (15:34 IST)
Photo Courtesy X
ಬೆಂಗಳೂರು: ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ದೇಸಾಯಿ ನಿಧನಕ್ಕೆ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕನ್ನಡದಲ್ಲಿ ಕಿಚ್ಚನಿಗೆ ಪತ್ರ ಬರೆದಿರುವ ಪವನ್ ಕಲ್ಯಾಣ್ ಅವರು ಈ ದುಃಖವನ್ನು ಭರಿಸುವ ಶಕ್ತಿಯನ್ನು ಕಿಚ್ಚ ಸುದೀಪ್ ಕುಟುಂಬಸ್ಥರುಎ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಸರೋಜಾ ಅವರ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌, ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಸಿನಿಮಾ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

'ಖ್ಯಾತ ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಎಂದು ಶ್ರೀ ಸುದೀಪ್ ಅವರು ಹೇಳಿದ್ದರು. ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಶ್ರೀ ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು' ಎಂದು  ಡಿಸಿಎಂ ಪವನ್ ಕಲ್ಯಾಣ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ