ನವಿಲು ಬೇಟೆ: ಗ್ರಾ.ಪಂ ಮಾಜಿ ಅಧ್ಯಕ್ಷ ಸೇರಿ ಇಬ್ಬರ ಬಂಧನ

ಶನಿವಾರ, 6 ಆಗಸ್ಟ್ 2016 (11:04 IST)
ರಾಷ್ಟ್ರೀಯ ಪಕ್ಷಿ ನವಿಲನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖದೀಮರು ಜೈಲು ಸೇರಿದ್ದಾರೆ.
 
ಶಿವಮೊಗ್ಗ ಜಿಲ್ಲೆಯ ಶಿಕಾರಿಪೂರದ ಶಿರಾಳಕೊಪ್ಪದಲ್ಲಿ ನವಿಲನ್ನು ಮಾಂಸಕ್ಕಾಗಿ ಬೇಟೆಯಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಅರೋಪಿಗಳನ್ನು ಕಾರು ಸಮೇತ ಬಂಧಿಸಿದ್ದಾರೆ. ಬಂಧಿತರನ್ನು ಗ್ರಾಂ ಪಂಚಾಯತ್ ಮಾಜಿ ಅಧ್ಯಕ್ಷ ಅಜೀಜ್ ಖಾನ್ (61) ಹಾಗೂ ಶಿರಾಳಕೊಪ್ಪದ ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಮುದಾಸರ್ (42) ಗುರುತಿಸಲಾಗಿದೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿ ತಲೆಮರಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆ 19, 50, 51, 39, 71ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ