ಬಳ್ಳಾರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ‘ಎಲ್ಲ ಸಮುದಾಯಗಳು ಅಸಹಿಷ್ಣುತೆಗೆ ಸಂಬಂಧಿಸಿದ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಒಂದೇ ಸಮುದಾಯವನ್ನು ಗುರಿಯನ್ನಾಗಿಸಿಕೊಂಡು ವಿವಾದವನ್ನು ಪ್ರಾರಂಭಿಸಲಾಗಿದೆ. ಈ ವಿಷಯದ ಮೇಲೆ ರಾಷ್ಟ್ರ ಮಟ್ಟದ ಚರ್ಚೆಯಾಗಬೇಕು', ಎಂದರು.
'ಪ್ರಮುಖ ರಾಜಕೀಯ ಪಕ್ಷಗಳು ಈ ಸಮಸ್ಯೆಯ ಲಾಭ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಮಸ್ಯೆಗೆ ಪರಿಹಾರವಲ್ಲ. ಎಲ್ಲ ಪಕ್ಷದ ಮುಖಂಡರು ಅಸಹಿಷ್ಣುತೆಯ ವಿರುದ್ಧ ಒಕ್ಕೊರಲಿನ ನಿಲುವನ್ನು ತೆಗೆದುಕೊಳ್ಳಬೇಕು,' ಎಂದು ಶ್ರೀಗಳು ಹೇಳಿದ್ದಾರೆ.