ಅಯೋಧ್ಯೆ ಶಾಂತಿ ಸಭೆಯಲ್ಲಿ ಪಾಲ್ಗೊಂಡ ಪೇಜಾವರ ಶ್ರೀ

ಭಾನುವಾರ, 10 ನವೆಂಬರ್ 2019 (15:03 IST)
ಅಯೋಧ್ಯೆ ಪ್ರಕರಣದ ಸುದೀರ್ಘ ವಾದ – ಪ್ರತಿವಾದ ಬಳಿಕ ಮಹತ್ವದ ತೀರ್ಪು ಹೊರಬಿದ್ದಿದೆ.

ಈ ನಡುವೆ ಸುಪ್ರೀಂ ಕೋರ್ಟ್ ನೀಡಿರೋ ತೀರ್ಪಿನ ನಂತರ ದೆಹಲಿಯಲ್ಲಿ ಶಾಂತಿ ಸಭೆ ಏರ್ಪಡಿಸಲಾಗಿದ್ದು, ರಾಜ್ಯದ ಉಡುಪಿ ಪೇಜಾವರ ಮಠದ ಸ್ವಾಮೀಜಿಗಳು ಅದ್ರಲ್ಲಿ ಪಾಲ್ಗೊಂಡಿದ್ದಾರೆ.

ದೇಶದ ರಾಜಧಾನಿಯಲ್ಲಿ ನಡೆಯುತ್ತಿರೋ ಶಾಂತಿ ಸಭೆಯಲ್ಲಿ ದೇಶದ ವಿವಿಧ ಭಾಗಗಳ 20 ಪ್ರಮುಖರು ಪಾಲ್ಗೊಂಡಿದ್ದಾರೆ. ಹಿಂದು-ಮುಸ್ಲಿಂ ಸೇರಿದಂತೆ ಪ್ರಮುಖ ಧರ್ಮಗಳ ಧರ್ಮಗುರುಗಳು ಪಾಲ್ಗೊಂಡಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಮುಂದೆ ಯಾವ ಯಾವ ಹೆಜ್ಜೆಗಳ ಮೂಲಕ ದೇಶದಲ್ಲಿ ಶಾಂತಿ, ಸೌಹಾರ್ಧ ನೆಲೆಸಲು ಕ್ರಮ ಕೈಗೊಳ್ಳಬೇಕೆಂದು ಚರ್ಚೆ ನಡೆಸಲಾಯಿತು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ