ಧರ್ಮಸ್ಥಳ ಮಹಾಮಸ್ತಕಾಭಿಷೇಕಕ್ಕೆ ಹಾಕಲಾದ ಬೃಹತ್ ಪೆಂಡಾಲ್ ಕುಸಿತ; 10 ಮಂದಿಗೆ ಗಾಯ

ಶುಕ್ರವಾರ, 15 ಫೆಬ್ರವರಿ 2019 (10:29 IST)
ಮಂಗಳೂರು : ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಹಾಕಲಾದ  ಬೃಹತ್ ಪೆಂಡಾಲ್ ಕುಸಿದು ಬಿದ್ದು ಸುಮಾರು 10 ಮಂದಿ ಗಾಯಗೊಂಡ ಘಟನೆ ನಡೆದಿದೆ.


ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಪಂಚಮಹಾವೈಭವ ಕಾರ್ಯಕ್ರಮ ವೀಕ್ಷಣೆಗಾಗಿ ದೇವಾಲಯದ ಪಾರ್ಕಿಂಗ್ ಜಾಗದ ಬಳಿ ಇರುವ ಅಮೃತವರ್ಷಿಣಿ ಸಭಾಂಗಣದಲ್ಲಿ ಬೃಹತ್ ಪೆಂಡಾಲ್ ಅನ್ನು ಹಾಕಲಾಗಿತ್ತು. ಈ ಪೆಂಡಾಲ್ ಗುರುವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ.


ಈ ಪೆಂಡಾಲ್ ಕೆಳಗೆ ಕೆಲವರು ಮಾತ್ರ ಕುಳಿತಿದ್ದು, ಸುಮಾರು  10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಮಧ್ಯಾಹ್ನವೇ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತ ಕೈತಪ್ಪಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ