ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ನೀರಿಗಾಗಿ ಹಾಹಾಕಾರ!

ಸೋಮವಾರ, 12 ಫೆಬ್ರವರಿ 2018 (17:12 IST)
ಜೇವರ್ಗಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿರುವ ಜೇವರ್ಗಿಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನೀರಿಗಾಗಿ ಜನರು ಮುಗಿಬಿದ್ದ ಘಟನೆ ನಡೆದಿದೆ.
 

ಜೇವರ್ಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ರಾಹುಲ್ ಗಾಂಧಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಇಲ್ಲಿನ ಬಿಸಿಲಿಗೆ ಮಧ್ಯಾಹ್ನದಿಂದಲೇ ಜನ ಸೇರಿದ್ದಾರೆ.

ಬಿಸಿಲಿನ ಝಳಕ್ಕೆ ಬೆಂಡಾದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ನಂತರ ನೀರಿನ ಪ್ಯಾಕೆಟ್ ವಿತರಿಸಲಾಯಿತು. ಈ ಸಂದರ್ಭ ನೀರಿಗಾಗಿ ಜನರು ಮುಗಿಬಿದ್ದ ಘಟನೆ ನಡೆಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ