ಬೃಹತ್ ರಾಷ್ಟ್ರ ಧ್ವಜ ಹಿಡಿದ ಜನರು!

ಶನಿವಾರ, 16 ಫೆಬ್ರವರಿ 2019 (10:02 IST)
ಪಾಕ್ ಉಗ್ರರು ನಮ್ಮ ಯೋಧರ ಮೇಲೆ ನಡೆಸಿದ ದಾಳಿ ಖಂಡಿಸಿ ಬೃಹತ್ ರಾಷ್ಟ್ರ ಧ್ವಜ ಹಿಡಿದು ಜನರು ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರದ ಬಸ್ ನಿಲ್ದಾಣ ವೃತ್ತದಲ್ಲಿ ಶ್ರೀರಾಮಸೇನೆ ಸೇರಿದಂತೆ ವಿವಿಧ ಸಂಘಟನೆ ಕಾರ್ಯಕರ್ತರು 108 ಅಡಿ ಭಾರತ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು.

ಪಾಪಿ ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ಮೃತ ಸೈನಿಕರ ಕುಟುಂಬಕ್ಕೆ  ಸರ್ಕಾರ ಸೂಕ್ತ ಪರಿಹಾರ ಘೋಷಣೆ ಮಾಡುವಂತೆ ಒತ್ತಾಯ ಮಾಡಲಾಯಿತು. ಹತ್ಯೆಯಾಗಿರುವ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.

ದಾಳಿ ನಡೆಸಿದ ಉಗ್ರರಿಗೆ ಸರಿಯಾದ ರೀತಿ ಉತ್ತರ ಕೊಡಬೇಕು. ಸರ್ಕಾರ ಗಂಭೀರವಾಗಿ ಪರಿಗಣಿಸಿ ಗಟ್ಟಿಯಾದ ನಿರ್ಣಯ ತೆಗೆದುಕೊಳ್ಳಬೇಕು. ಗಡಿ ಭಾಗದಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಬೇಕೆಂದು ಆಗ್ರಹಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ