ಜನರು ಸಂಕಷ್ಟದಲ್ಲಿದಾಗ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ - ಶ್ರೀರಾಮುಲು ಟ್ವೀಟ್

ಭಾನುವಾರ, 7 ಆಗಸ್ಟ್ 2022 (18:22 IST)
ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.ಅನೇಕ ಜನ ಪ್ರಾಣ ಕಳೆದುಕೊಂಡು ಆಸ್ತಿ ಪಾಸ್ತಿ ನಾಶವಾಗಿ ಸಂಕಷ್ಟದಲ್ಲಿದ್ದಾರೆ. ಜನತೆ ಕಷ್ಟದಲ್ಲಿರುವಾಗ ನನ್ನ ಹುಟ್ಡು ಹಬ್ಬ ಆಚರಿಸಿಕೊಳ್ಳಲು ಮನಸ್ಸು ಒಪ್ಪುತ್ತಿಲ್ಲ. ಇದು ಒಪ್ಪುವ ವಿಚಾರವಲ್ಲ ಎಂದು ಶ್ರೀರಾಮುಲು ತಿಳಿಸಿದ್ದಾರೆ.
 
ಜನರು ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ.ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ.ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ.ನನ್ನ ಮೇಲೆ ಅಭಿಮಾನ ಇರುವ ಹಾಗೂ ನನಗೆ ಪ್ರೀತಿ ತೋರುವ ಎಲ್ಲರೂ ನನ್ನ ಈ ಮನವಿಗೆ ಸ್ಪಂದಿಸುವಿರಿ ಎಂದು  ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ