ಜನರಿಗೆ ಕರೆಂಟ್ ಶಾಕ್ ಹೊಡೆದಿದೆ

ಮಂಗಳವಾರ, 20 ಜೂನ್ 2023 (19:00 IST)
ಜನರಿಗೆ ಕರೆಂಟ್ ಶಾಕ್ ಹೊಡೆದಿದೆ ಅಂತಾ ಕಾಂಗ್ರೆಸ್​​​ ವಿರುದ್ದ ಕಿಡಿಕಾರುತ್ತಾ ಸಂಸದ ಪ್ರತಾಪ್​​ ಸಿಂಹ ಈ ಹೇಳಿಕೆ ನೀಡಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಕೈಗಾರಿಕಾ ಉದ್ಯಮಿಗಳು ಕರ್ನಾಟಕ ಬಂದ್​​​ಗೆ ಕರೆ ನೀಡಿದ್ದಾರೆ. ಕೈಗಾರಿಕೆಗಳಿಗೆ ಬರೆ ಹಾಕುವ ಕೆಲಸ ನಡೆಯುತ್ತಿದೆ.. 200 ಯೂನಿಟ್ ಫ್ರೀ ಅಂತಾ ಹೇಳಿದ್ದಿರಿ.. ನಿಮ್ಮ ಮನೆಯಲ್ಲಿ ಎಷ್ಟು ವಿದ್ಯುತ್ ಖರ್ಚಾಗುತ್ತದೆ ಎಂಬ ಅರಿವು ನಿಮಗೆ ಇಲ್ವಾ?.. ನಿಮ್ಮದು ದೋಖಾ ಸರಕಾರ ಅಲ್ವಾ ಅಂತಾ ಪ್ರಶ್ನಿಸಿದ್ದಾರೆ.. ರಾಜ್ಯದ ಜನರು ಕೈಗಾರಿಕೋದ್ಯಮಿಗಳು ಕರೆ ಕೊಟ್ಟ ಕರ್ನಾಟಕ ಬಂದ್​​ಗೆ ಕೈ ಜೋಡಿಸಿ.. ಉಚಿತ ಯೋಜನೆಗಳು ಒಂಥರ ಗಂಡನ ದರೋಡೆ ಮಾಡಿ ಪತ್ನಿಗೆ ಕೊಟ್ಟಂತಾಗಿದೆ ಅಂತಾ ಕಾಂಗ್ರೆಸ್​​​ ವಿರುದ್ದ ಸಂಸದ ಪ್ರತಾಪ್​​ ಸಿಂಹ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ