ಲಾಕ್ ಡೌನ್ ಹಿನ್ನಲೆ ತವರೂರಿನತ್ತ ಜನರು; ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಟ್ರಾಫಿಕ್ ಜಾಮ್

ಸೋಮವಾರ, 13 ಜುಲೈ 2020 (09:30 IST)
Normal 0 false false false EN-US X-NONE X-NONE

ಬೆಂಗಳೂರು : ಮಂಗಳವಾರದಿಂದ 7 ದಿನಗಳ ಕಾಲ ಲಾಕ್ ಡೌನ್ ಇರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿದ್ದ ವಲಸಿಗರು ತಮ್ಮ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಿಸಲು ಮಂಗಳವಾರ ರಾತ್ರಿ 8 ಗಂಟೆಯಿಂದ 7 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ. ಆದಕಾರಣ ಜನರು ಸಂಡೇ ಲಾಕ್ ಡೌನ್ ಮುಗಿಯುತ್ತಿದ್ದಂತೆ ಇಂದು ಬೆಳ್ಳಂಬೆಳಿಗ್ಗೆ ಜನರು ತಮ್ಮ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ಇದರಿಂದ ಬೆಂಗಳೂರಿನ ಹಲವು ಟ್ರಾಫಿಕ್ ಜಾಮ್ ಆಗಿದೆ. ಮಾಮೂಲಿ ದಿನಗಳಿಗಿಂತ ಇಂದು ಹೆಚ್ಚು ವಾಹನ ಸಂಚಾರ ಕಂಡುಬಂದಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ