ಟಿಪ್ಪು ಜಯಂತಿ ಆಚರಣೆ ವಿಚಾರ: ಹೈಕೋರ್ಟ್ ನಲ್ಲಿಂದು ಪಿಐಎಲ್ ವಿಚಾರಣೆ

ಶುಕ್ರವಾರ, 3 ನವೆಂಬರ್ 2017 (13:22 IST)
ಬೆಂಗಳೂರು: ಸದ್ಯ ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವುದು ಟಿಪ್ಪು ಜಯಂತಿ ಆಚರಣೆ ವಿಚಾರ. ಕಳೆದ ವರ್ಷದ ಟಿಪ್ಪು ಜಯಂತಿ ಆಚರಣೆ ವೇಳೆ ಅಹಿತಕರ ಘಟನೆಗಳು ನಡೆದಿದ್ದವು.

ರಾಜ್ಯ ಸರ್ಕಾರದ ವತಿಯಿಂದ ನ.10 ರಂದು ರಾಜ್ಯಾದ್ಯಂತ `ಟಿಪ್ಪು ಸುಲ್ತಾನ್‌ ಜಯಂತಿ'  ಆಚರಣೆ ಸಂಬಂಧ ಅ. 24ರಂದು ಹೊರಡಿಸಲಾಗಿದೆ. ಈ ಸುತ್ತೋಲೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಕನಿಕ ಹಿತಾಸಕ್ತಿ ಅರ್ಜಿ ಹೂಡಲಾಗಿದೆ.

ಕೊಡಗಿನ ಕೆ.ಪಿ.ಮಂಜುನಾಥ್‌ ಎಂಬುವರು ಈ ಪಿಐಎಲ್ ಸಲ್ಲಿಸಿದ್ದು, ಇಂದು ವಿಚಾರಣೆಗೆ ಬರಲಿದೆ. ಹಂಗಾಮಿ ಸಿಜೆ ಎಚ್‌.ಜಿ.ರಮೇಶ್‌ ನೇತೃತ್ವದ ನ್ಯಾಯಪೀಠದ ಮುಂದೆ ಪಿಐಎಲ್ ವಿಚಾರಣೆಗೆ ಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ