ನನ್ನನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ: ಪೇಜಾವರ ಶ್ರೀ

ಶನಿವಾರ, 8 ಜುಲೈ 2017 (19:12 IST)
ಪ್ರಗತಿಪರರು ನನ್ನನ್ನು ದಯವಿಟ್ಟು ಅರ್ಥಮಾಡಿಕೊಳ್ಳಲಿ. ಆದರೆ ಇದುವರೆಗೂ ನನ್ನ ಬಗ್ಗೆ ಅರ್ಥಮಾಡಿಕೊಂಡಿಲ್ಲ ಎಂದು ಪೇಜಾವರ ಶ್ರೀಗಳು ವಿಷಾದ ವ್ಯಕ್ತಪಡಿಸಿದ್ದಾರೆ.
 
ಹಿಂಸೆ ಬೇಡ ಎಂದು ಕಾಶ್ಮಿರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡಲು ಸಾಧ್ಯವಾಗುತ್ತಾ? ದೇಶದಲ್ಲಿ ಎಲ್ಲರಿಗೂ ಸಮಾನತೆ ಇರಬೇಕು ಹಿಂಸೆ ಪ್ರಚೋದನೆ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
 
ರಾಮಜನ್ಮಭೂಮಿ ವಿವಾದಕ್ಕೆ ಪರಿಹಾರವಿದೆ. ರಾಮಜನ್ಮಭೂಮಿ ಪರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎನ್ನುವುದಕ್ಕೆ ಸಾಕಷ್ಟು ಪುರಾವೆಗಳಿವೆ. ಒಂದು ವೇಳೆ, ರಾಮಜನ್ಮಭೂಮಿ ವಿಚಾರವಾಗಿ ಭಿನ್ನಾಭಿಪ್ರಾಯಗಳಿದ್ದಲ್ಲಿ ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ. 

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ