ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಏಕಾಏಕಿ 500, 1000 ಮುಖಬೆಲೆಯ ನೋಟ್ ಬ್ಯಾನ್ ಮಾಡಿದ ನಂತರ 125 ಕೋಟಿ ಬ್ಲ್ಯಾಕ್ ಮನಿ ಖರ್ಚು ಮಾಡಿ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ಪುತ್ರಿಯ ಅದ್ಧೂರಿ ವಿವಾಹ ಮಾಡಿದ್ದಾರೆ. ಇತ್ತ ಸಂಸದ ಶ್ರೀರಾಮುಲು 100 ಕೋಟಿ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿದ್ದಾರೆ. ಜನಸಾಮಾನ್ಯರು ದಿನಕ್ಕೆ 2 ಸಾವಿರ ರೂಪಾಯಿ ಪಡೆಯಲು ಪರದಾಡುತ್ತಿದ್ದಾರೆ. ಆದರೆ, ಇಂತವರು ಬ್ಲ್ಯಾಕ್ ಮನಿಯನ್ನು ವೈಟ್ ಮಾಡುವ ದಂಧೆಯಲ್ಲಿ ತೊಡಗಿ ದೇಶದಲ್ಲಿ ಆರ್ಥಿಕ ಅಪರಾಧಗಳನ್ನು ಎಸಗಿದ್ದಾರೆ ಎಂದು ಕಿಡಿ ಕಾರಿದರು.