ಅಂಗನವಾಡಿ ಕಾರ್ಯಕರ್ತರೊಂದಿಗೆ ಪಿಎಂ ಸಂವಾದ

Webdunia
ಬುಧವಾರ, 12 ಸೆಪ್ಟಂಬರ್ 2018 (14:01 IST)
ರಾಷ್ಟ್ರೀಯ ಪೋಷಣೆ ಅಭಿಯಾನ ಮಾಸಾಚರಣೆ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಜೊತೆಗೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್​ ನಡೆಸಿದ್ದಾರೆ.

ದೇಶದಲ್ಲಿ ಜಾರಿಯಾಗಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಬಗ್ಗೆ ಸಂವಾದದಲ್ಲಿ ಪ್ರಧಾನಿ ವಿಷಯ ಪ್ರಸ್ತಾಪಿಸಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜತೆ ಮಾತನಾಡಿದರಯ, ಕರ್ನಾಟಕದಿಂದ ಯಾದಗಿರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು ಹಾಗೂ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ಆರಂಭಿಸಿದರು.

ಮೊದಲಿಗೆ ಕನ್ನಡದಲ್ಲಿಯೇ ನಿಮ್ಮೆರಿಗೂ ನನ್ನ ಹಾರ್ದಿಕ ಶುಭಾಶಯಗಳು ಅಂತ ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಯಾದಗಿರಿ ಜಿಲ್ಲೆಯಲ್ಲಿ ಮಾತೃವಂದನಾ ಯೋಜನೆ ಬಗ್ಗೆ ಅಂಗನವಾಡಿ ಮೇಲ್ವಿಚಾರಕಿ ಮಲ್ಲಮ್ಮ ಜೊತೆ ಮಾತನಾಡಿದರು. ಆ ಬಳಿಕ ಮಾತನಾಡಿದ ಪ್ರಧಾನಿ ಮೋದಿ ದೇಶದಲ್ಲಿ ಇರುವ ರಕ್ತ ಹೀನತೆ ಪ್ರಮಾಣ ಕಡಿಮೆ ಮಾಡುವಲ್ಲಿ ತಮ್ಮ ಶ್ರಮ ಅಗತ್ಯವೆಂದು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಗೆ ಪ್ರಧಾನಿ ಕರೆ ನೀಡಿದ್ರು. ಇನ್ನೂ ಪ್ರಧಾನಿ ಜೊತೆ ಮಾತನಾಡಿದ ಮಲ್ಲಮ್ಮ ತಮ್ಮ ಖುಷಿ ಹಂಚಿಕೊಂಡರು.


ಸಂಬಂಧಿಸಿದ ಸುದ್ದಿ

Next Article