ಹಾಸನದಲ್ಲಿ ದುರಂತಕ್ಕೀಡಾದವರಿಗೆ ಪ್ರಧಾನಿ ಮೋದಿಯಿಂದಲೂ ಪರಿಹಾರ
ಹಾಸನದಲ್ಲಿ ನಿನ್ನೆ ಗಣೇಶ ಮೆರವಣಿಗೆ ವೇಳೆ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ಜನರತ್ತ ನುಗ್ಗಿದ ಟ್ರಕ್ 9 ಜನರನ್ನು ಬಲಿತೆಗೆದುಕೊಂಡಿತ್ತು. ಘಟನೆಯಲ್ಲಿ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಘಟನೆ ಇಡೀ ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.
ಈ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಮೃತಪಟ್ಟವರ ಕುಟುಂಬಸ್ಥರಿಗೆ ರಾಷ್ಟ್ರೀಯ ಪರಿಹಾರ ನಿಧಿಯಡಿ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಇದಕ್ಕೆ ಮೊದಲು ಸಿಎಂ ಸಿದ್ದರಾಮಯ್ಯ ಕೂಡಾ ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಗಾಯಗೊಂಡವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.