ಸಿಎಂ ಕುಮಾರಸ್ವಾಮಿಗೆ ಕರೆ ಮಾಡಿದ ಪ್ರಧಾನಿ ಮೋದಿ

ಸೋಮವಾರ, 20 ಆಗಸ್ಟ್ 2018 (10:01 IST)
ನವದೆಹಲಿ: ಕೊಡಗಿನಲ್ಲಿ ಪ್ರವಾಹದಿಂದಾಗಿ ಜನ ಜೀವನ ಸಂಕಷ್ಟದಲ್ಲಿರುವಾಗಲೇ ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಕರೆ ಮಾಡಿ ಸ್ಥಿತಿ ಗತಿ ವಿವರ ಪಡೆದಿದ್ದಾರೆ.

ಕೊಡಗಿನಲ್ಲಿ ಸಾವಿರಾರು ಜನರ ಬದುಕು ಅತಂತ್ರವಾಗಿದೆ. ಈ ಸಂಬಂಧ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಸಿಎಂ ಕುಮಾರಸ್ವಾಮಿಗೆ ಕರೆ ಮಾಡಿ ವಿವರಣೆ ಪಡೆದಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಕೂಡಾ ಮಾಡಿದ್ದು, ಕೊಡಗಿನ ಸ್ಥಿತಿ ಗತಿ ಬಗ್ಗೆ ವಿವರಣೆ ಪಡೆದಿದ್ದೇನೆ. ಕೇಂದ್ರದಿಂದ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ