ಇಂದಿನಿಂದ ಪ್ರಧಾನಿ ಮೋದಿ ರಾಜ್ಯಕ್ಕೆ ಎಂಟ್ರಿ

ಮಂಗಳವಾರ, 1 ಮೇ 2018 (07:37 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರ ಭರ್ಜರಿ ಮತ ಭೇಟೆ ಮಾಡಲು ಇಂದಿನಿಂದ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಧಾನಿ ಸ್ವಾಗತಕ್ಕೆ ಈಗಾಗಲೇ ಬಿಜೆಪಿ ನಾಯಕರು, ಕಾರ್ಯಕರ್ತರು ಸಜ್ಜಾಗಿದ್ದು, ಹಲವು ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯಿಂದ ತೊಡಗಿ ಉಡುಪಿಯವರೆಗೂ ಪ್ರಧಾನಿ ಮೋದಿ ಸುಮಾರ 15 ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆಯಲಿದ್ದಾರೆ. ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಬಿಜೆಪಿ ಉತ್ಸಾಹ ದುಪ್ಪಟ್ಟಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ