ಪ್ರಧಾನಿ ಮೋದಿ ಹೇಳಿದ ಆ ‘ಮಹಾ’ ಮಾತು ಏನು ಗೊತ್ತಾ?

ಭಾನುವಾರ, 6 ಮೇ 2018 (07:07 IST)
ಗದಗ: ಮಹದಾಯಿ ವಿಚಾರವಾಗಿ ಹೋರಾಟಗಾರರು ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆಗೆ ಸಜ್ಜಾದ ಬೆನ್ನಲ್ಲೇ ಅವರೇ ವಿವಾದದ ಬಗ್ಗೆ ಮಾತನಾಡಿದ್ದಾರೆ.

ಗದಗದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಮಹದಾಯಿ ವಿವಾದ ಇಷ್ಟೊಂದು ಬೆಳೆಯಲು ಕಾಂಗ್ರೆಸ್ ಸರ್ಕಾರಗಳೇ ಕಾರಣ ಎಂದು ದೂರಿದ್ದಾರೆ.

‘ಮೂರು ದಶಕಗಳಿಂದ ಈ ಸಮಸ್ಯೆಯನ್ನು ಇಷ್ಟೊಂದು ಎಳೆಯಲು ಬಿಟ್ಟಿದ್ದು ಕಾಂಗ್ರೆಸ್. ಮಹದಾಯಿ ವಿವಾದ ಆರಂಭವಾದಾಗ ಕೇಂದ್ರದಲ್ಲಿ, ಗೋವಾದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಅವರೇ ಇದನ್ನು ಬಗೆಹರಿಸಿಕೊಳ್ಳಬಹುದಿತ್ತು. ಆದರೆ ಕಾಂಗ್ರೆಸ್ ವಿವಾದವನ್ನು ನ್ಯಾಯಾಧಿಕರಣಕ್ಕೆ ಬಿಡುವ ಪಾಪದ ಕೆಲಸ ಮಾಡಿತು.

ನೀರು ಎಲ್ಲರ ಅಗತ್ಯವಾಗಿದೆ. ನನಗೆ ಈ ವಿಚಾರದಲ್ಲಿ ಅನಗತ್ಯ ರಾಜಕೀಯ ಮಾಡಲು ಇಷ್ಟವಿಲ್ಲ. ಹಾಗಾಗಿ ಸೂಕ್ತ ರೀತಿಯಲ್ಲಿ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುತ್ತೇನೆ’ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ