ಪೋಕ್ಸೋ ಪ್ರಕರಣ: ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ಶಿವಮೂರ್ತಿ ಶರಣರು

Sampriya

ಸೋಮವಾರ, 29 ಏಪ್ರಿಲ್ 2024 (15:50 IST)
ಚಿತ್ರದುರ್ಗ:  ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದಲ್ಲಿ ಫೋಕ್ಸೋ ಕಾಯ್ದೆಯಡಿ  ದಾಖಲಾದ ಪ್ರಕರಣದಲ್ಲಿ ಆರೋಪಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಜಿಲ್ಲಾ ನ್ಯಾಯಾಲಯಕ್ಕೆ ಇಂದು ಶರಣಾದರು.

ಸುಪ್ರೀಂಕೋರ್ಟ್‌ ಮುರುಘಾ ಮಠದ ಶಿವಮೂರ್ತಿ ಅವರಿಗೆ ಷರತ್ತು ಬದ್ಧ ಜಾಮೀನಿಗೆ ನಾಲ್ಕು ತಿಂಗಳು ತಡೆ ನೀಡಿ, ವಾರದೊಳಗೆ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಏ.22ರಂದು ಆದೇಶ ನೀಡಿತ್ತು.

ಇದೀಗ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಶಿವಮೂರ್ತಿ ಶರಣರು ಇಂದು ಮಧ್ಯಾಹ್ನ 2.20ಕ್ಕೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾದರು.

ಮಧ್ಯಾಹ್ನದ ಕಲಾಪ  ಆರಂಭವಾಗುವವರೆಗೂ ನ್ಯಾಯಾಲದ ಆವರಣದಲ್ಲಿ ಕಾಯುತ್ತಾ ಕುಳಿತರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ