ನೀರಿನ ಟ್ಯಾಂಕ್ ಗೆ ವಿಷ ಬೆರಕೆ: 10 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸೋಮವಾರ, 15 ಜುಲೈ 2019 (13:04 IST)
ಆ ಶಾಲಾ ಮಕ್ಕಳು ಎಂದಿನಂತೆ ಶಾಲೆಯಲ್ಲಿನ ನೀರು ಕುಡಿದಿದ್ದಾರೆ. ಆದರೆ ಇಂದು ಕುಡಿದ ನೀರು ಅವರನ್ನು ಆಸ್ಪತ್ರೆಗೆ ಸೇರುವಂತೆ ಮಾಡಿದೆ.

ವಿಷಯುಕ್ತ ನೀರನ್ನು ಸೇವನೆ ಮಾಡಿದ ಕಾರಣದಿಂದ 10ಕ್ಕೂ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಶಾಲೆಯಲ್ಲಿರುವ ನೀರಿನ ಟ್ಯಾಂಕಿಗೆ ಯಾರೋ ದುಷ್ಕರ್ಮಿಗಳು ವಿಷ ಬೆರೆಸಿದ್ದಾರೆ. ಈ ವಿಷಯ ಅರಿಯದ ಮಕ್ಕಳು ನೀರು ಕುಡಿದ ಪರಿಣಾಮ ಅಸ್ವಸ್ಥಗೊಂಡಿದ್ದಾರೆ.

ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಅಸ್ವಸ್ಥಗೊಂಡಿರುವಂತಹ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನೀರಿನ ಟ್ಯಾಂಕಿಗೆ ವಿಷ ಹಾಕಿರುವ ದುಷ್ಕರ್ಮಿಗಳನ್ನು ಬಂಧಿಸುವಂತೆ ಪಾಲಕರು, ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ