ಗುಂಡ್ಲುಪೇಟೆ: ಮತದಾರರಿಗೆ ಹಣ ಹಂಚುತ್ತಿರುವವರು ಪೊಲೀಸ್ ವಶಕ್ಕೆ
ಸೋಮವಾರ, 3 ಏಪ್ರಿಲ್ 2017 (19:39 IST)
ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಿಕೊಂಡು ಹಣ ಹಂಚುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಿಕೊಂಡು ಆಧಾರ ಕಾರ್ಡ್ ಇರುವ ಮತದಾರರಿಗೆ ಹಣ ಹಂಚುತ್ತಿರುವ ಮಾಹಿತಿ ಲಭ್ಯವಾಗಿರುವುದರಿಂದ ಚುನಾವಣಾಧಿಕಾರಿಗಳು ಬೇಗೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹಣ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಲು ತೆರಳಿದಾಗ ನಾಲ್ವರು ಪರಾರಿಯಾಗಿದ್ದಾರೆ. ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹಣ ಹಂಚುತ್ತಿರುವವರನ್ನು ಬಂಧಿಸಿಲಾಗಿದೆ ಎನ್ನುವ ಮಾಹಿತಿ ತಿಳಿದ ಬಿಜೆಪಿ ಕಾರ್ಯಕರ್ತರು ಬೇಗೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.